Site icon Suddi Belthangady

ಹೊಸಂಗಡಿ: ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಹೊಸಂಗಡಿ: ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ ನಡೆಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನಾಟಿ ಕಾರ್ಯಕ್ರಮವು ಹನ್ನೆರಡು ಕವಲು ಶ್ರೀ ಗಣೇಶ ಭಜನಾ ಮಂದಿರದಲ್ಲಿ ಜೂ.5ರಂದು ನಡೆಯಿತು.

ಹೊಸಂಗಡಿ ವಲಯದ ಮೇಲ್ವಿಚಾರಕಿ ವೀಣಾ ಹಾಗೂ ವಲಯಾಧ್ಯಕ್ಷ ಸತೀಶ್ ಮಠ ಇವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ‌ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಭಜನಾ ಮಂದಿರದ ಸುತ್ತ ಮುತ್ತ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ, ಘಟಕ ಪ್ರತಿನಿಧಿ ಪ್ರವೀಣ್ ಆಚಾರ್ಯ, ಸೇವಾ ಪ್ರತಿನಿಧಿಗಳಾದ ಹರೀಶ್ ಬಾಡಾರು, ಮಮತಾ ಹಾಗೂ ಘಟಕದ ಸ್ವಯಂ ಸೇವಕರು ಹಾಗೂ ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Exit mobile version