ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಸಭೆ

0

ಉಜಿರೆ: ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಇದರ ವಾರ್ಷಿಕ ಮಹಾಸಭೆ ಮತ್ತು ಕ್ರೀಡಾಕೂಟದ ಬಗ್ಗೆ ಪೂರ್ವ ತಯಾರಿ ಸಭೆ ಉಜಿರೆ ಶ್ರೀ ರಾಮಕೃಷ್ಣ ಸಭಾಭವನದಲ್ಲಿ ಜೂ.6ರಂದು ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ಕ್ರೀಡಾಕೂಟವನ್ನು ಅಕ್ಟೋಬರ್ ನಲ್ಲಿ ನಡೆಸುವುದು ಮತ್ತು ವಾರ್ಷಿಕ ಮಹಾಸಭೆಯನ್ನು ನವಂಬರ್ ತಿಂಗಳಿನಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.

ಈ ಸಂದರ್ಭ ಸಮಿತಿಯ ಗೌರವ ಅಧ್ಯಕ್ಷ ಪ್ರಕಾಶ್ ಗೌಡ ಅಪ್ರಮೇಯ, ತಾಲೂಕು ಸಮಿತಿ ಸಂಘಟನಾ ಕಾರ್ಯದರ್ಶಿ ಹಾಗೂ ಉಜಿರೆ ಗ್ರಾಮ ಸಮಿತಿಯ ಉಸ್ತುವಾರಿ ಕೃಷ್ಣಪ್ಪ ಗೌಡ ಸವಣಾಲು, ಕಾರ್ಯದರ್ಶಿ ಶೇಖರ್ ಗೌಡ, ಉಪ ಕಾರ್ಯದರ್ಶಿ ಲಕ್ಷ್ಮಣ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಕೋರಮೇರು, ಸಂಚಾಲಕ ಆನಂದ ಗೌಡ, ಯುವ ವೇದಿಕೆಯ ಅಧ್ಯಕ್ಷ ಶೇಖರ್ ಗೌಡ ಮಾಚಾರು,ಊರ ಗೌಡ ಕೊರಗಪ್ಪ ಗೌಡ, ವಲಯ ಅಧ್ಯಕ್ಷ ಕಾರ್ಯದರ್ಶಿಗಳು ಪದಾಧಿಕಾರಿಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಶೇಖರ್ ಗೌಡ ಸ್ವಾಗತಿಸಿ, ಪ್ರಕಾಶ್ ಗೌಡ ಅಪ್ರಮೇಯ ಪ್ರಾಸ್ತಾವಿಕ ಮಾತನಾಡಿದರು, ಕೋಶಾಧಿಕಾರಿ ಬಾಲಕೃಷ್ಣ ಗೌಡ ಕೋರಮೇರು ವಂದಿಸಿ, ಲಕ್ಷ್ಮಣ ಗೌಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here