ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

0

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಪರಿಸರದ ಕುರಿತಾದ ಕಾಳಜಿ ಮೂಡುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ, ರಸಪ್ರಶ್ನೆ ಏರ್ಪಡಿಸಲಾಗಿತ್ತು.ಹಾಗೂ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಮುಖ್ಯತೆಯ ಕುರಿತು ಶಾಲಾ ಶಿಕ್ಷಕರಾದ ಲಿಂಗಪ್ಪಗೌಡ ಇವರು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಅಧ್ಯಕ್ಷರಾಗಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ದಿನ ವಿಶೇಷತೆಯ ಕುರಿತು ಮಾಹಿತಿ ನೀಡಿದರು.

ವಿಜ್ಞಾನ ಶಿಕ್ಷಕಿ ತ್ರಿವೇಣಿ ಅವರು ಕಾರ್ಯಕ್ರಮವನ್ನು ಸಂಘಟಿಸಿದ್ದರು. ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here