Site icon Suddi Belthangady

ಮುಂಡಾಜೆ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂಡಾಜೆ: ಪದವಿಪೂರ್ವ ಕಾಲೇಜಿನಲ್ಲಿ ‘ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಯೋಗದೊಂದಿಗೆ ನಡೆಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಇವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸ್ವಪ್ರತಿಭೆಯಿಂದ ಸಿಗುವ ಉದ್ಯೋಗಾವಕಾಶಗಳು ಮತ್ತು ಶೈಕ್ಷಣಿಕವಾಗಿ ಸಿಗುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿಯನ್ನು ನೀಡಿ ವೃತ್ತಿಯ ಬಗ್ಗೆ ಯೋಜನೆಯನ್ನು ಈಗಲೇ ಮಾಡಬೇಕೆಂದು ಸಲಹೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಜಾಲಿ ಓ ಎ ಅವರು ವಹಿಸಿದ್ದರು.ವೇದಿಕೆಯಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ಉಪಸ್ಥಿತರಿದ್ದರು.

ಕುಮಾರಿ ತುಳಸಿ ಮತ್ತು ಕುಮಾರಿ ವರ್ಷ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿ ಪ್ರಿನ್ಸಿ ಇವರು ಸ್ವಾಗತಿಸಿ, ಕೀರ್ತನ ಇವರು ಧನ್ಯವಾದವಿತ್ತರು.

ವಿದ್ಯಾರ್ಥಿನಿ ಆತ್ಮಿಕ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಎಂ.ಎಸ್.ಡಬ್ಲ್ಯೂ.ವಿದ್ಯಾರ್ಥಿ ಚೇತನ್ ಇವರು ಸಹಕರಿಸಿದರು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Exit mobile version