ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ-ಕಾಲೇಜಿನಲ್ಲಿ ಶಾಲಾ ಪ್ರಾರಂಭೋತ್ಸವ

0

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಮೇ 20ರಂದು ಶಾಲೆ ಆರಂಭಗೊಂಡಿತ್ತು.

ಶಾಲಾ ಸಂಚಾಲಕ ಗಿರೀಶ್ ಕೆ ಹೆಚ್ ದೀಪವನ್ನು ಪ್ರಜ್ವಲಿಸುವುದರ ಮೂಲಕ ಪ್ರಸಕ್ತ ಸಾಲಿಗೆ ಚಾಲನೆಯನ್ನು ನೀಡಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾಭ್ಯಾಸದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವವನ್ನು ತಿಳಿಸಿದರು.

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ಇವರು ವಿದ್ಯಾರ್ಥಿಗಳಿಗೆ ಹೂವು ಹಾಗೂ ಸಿಹಿ ತಿಂಡಿಯನ್ನು ನೀಡುವುದರ ಮೂಲಕ ಶಾಲೆಗೆ ಬರಮಾಡಿಕೊಂಡರು.

ಮಕ್ಕಳನ್ನು ರಂಜಿಸಲು ಹಲವಾರು ಚಟುವಟಿಕೆಗಳನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here