Site icon Suddi Belthangady

ಪಡ್ಲಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ 

ಪಡ್ಲಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಪಡ್ಲಾಡಿ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯ ಯೋಗೀಶ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಪ್ಪ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದಿವಾಕರ, ಲಾಯಿಲ ಗ್ರಾಮ ಪಂಚಾಯತಿಯ ಸದಸ್ಯೆ ಜಯಂತಿ,  ಲಾಯಿಲ ಒಕ್ಕೂಟದ ಕಾರ್ಯದರ್ಶಿ ಲೀಲಾವತಿ, ಲಾಯಿಲ ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ಮಮತಾ, ಸೇವಾ-ಪ್ರತಿನಿಧಿ ಗೀತಾ ಉಪಸ್ಥಿತರಿದ್ದರು.

Exit mobile version