Site icon Suddi Belthangady

ಬೆಳ್ತಂಗಡಿ: ವಿ.ಹಿಂ.ಪ. ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯ ಗೋ ಹತ್ಯೆಯನ್ನು ಖಂಡಿಸಿ- ಪೊಲೀಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ.13ರಂದು (ಇಂದು) ಪೊಲೀಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಜಯಾನಂದ ಕಲ್ಮಂಜ, ರಾಘವ ಕಲ್ಮಂಜ ಇವರುಗಳು ಭಾಗವಹಿಸಿದ್ದರು.

Exit mobile version