9/11ಎ ಪ್ರಮಾಣ ಪತ್ರವನ್ನು ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರ.ಕಾ. ರಕ್ಷಿತ್ ಶಿವರಾಂ ಮನವಿ

0

ಬೆಳ್ತಂಗಡಿ: 9/11ಎ ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9 ಮತ್ತು 11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9 ಮತ್ತು 11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here