ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

0

ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಬಾ ಭವನದಲ್ಲಿ ಆಯೋಜಿಸಲಾಗಿತ್ತು.

ತರಬೇತಿಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಉದ್ಘಾಟಿಸಿ ಮಾತನಾಡುತ್ತಾ, ಒಕ್ಕೂಟದ ಪದಾಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿ ಗುಂಪುಗಳ ಪರಿಚಯ ಮಾಡಿಕೊಳ್ಳಬೇಕು.ಗುಂಪುಗಳ ನಿರ್ವಹಣೆಯಲ್ಲಿರುವ ಲೋಪಗಳನ್ನು ಗುರುತಿಸಿ ಅವುಗಳನ್ನು ಕಾರ್ಯಕರ್ತರ ಸಹಕಾರದ ಮೂಲಕ ಸರಿ ಪಡಿಸಬೇಕು. ಒಕ್ಕೂಟದ ಮಾಸಿಕ ಸಭೆಗಳಿಗೆ ಗುಂಪಿನ ಸದಸ್ಯರು ಸಾಲದ ಬೇಡಿಕೆಗಳನ್ನು ಸಲ್ಲಿಸಬೇಕು. ಒಕ್ಕೂಟ ಸಭೆ ಆದ ಬಳಿಕ ಉಪಸಮಿತಿ ಸಭೆಯನ್ನು ನಡೆಸಿ ಗುಂಪಿನ ಗುಣಮಟ್ಟ ಸದಸ್ಯರ ಮರು ಪಾವತಿ ಸಾಮರ್ಥ್ಯ ಪರಿಗಣಿಸಿ ಸಮರ್ಪಕವಾಗಿ ಚರ್ಚಿಸಿ ಸಾಲ ಬಿಡುಗಡೆಗೆ ಶಿಫಾರಸ್ಸು ಮಾಡಬೇಕು ಎಂದರು.

ಒಕ್ಕೂಟದ ವಾರ್ಷಿಕ ಬಜೆಟ್ ತಯಾರು ಮಾಡಿ ಅನುಷ್ಟಾನ ಮಾಡಬೇಕು. ಇವುಗಳಲ್ಲಿ ಮುಖ್ಯವಾಗಿ ಶಾಲಾ ಕೈ ತೋಟ, ಸ್ವಚ್ಛತಾ ಕಾರ್ಯಕ್ರಮ, ಪರಿಸರ ಕಾರ್ಯಕ್ರಮ, ಹೊಸ ಗುಂಪು ರಚನೆ, ಶ್ರಮದಾನ, ಕೃಷಿ ತರಬೇತಿ, ಅಧ್ಯಯನ ಪ್ರವಾಸ, ಗಿಡಗಳ ನಾಟಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ನೀರಾವರಿ ಸೌಲಭ್ಯ, ಸಮುದಾಯ ಅಭಿವೃದ್ಧಿ ಕಾರ್ಯಗಳು ಮೊದಲಾದವುಗಳನ್ನು ಪರಿಗಣಿಸಬೇಕು ಎಂದು ವಿವರಿಸಿದರು‌.

ಉಡುಪಿ ಪ್ರಾದೇಶಿಕ ವಿಭಾಗದ ಕಚೇರಿ ತಪಾಸಣಾ ವಿಭಾಗದ ಯೋಜನಾಧಿಕಾರಿ ಅಮರ್ ಪ್ರಸಾದ್, ಸಮನ್ವಯಧಿಕಾರಿ ಹೇಮಲತಾ, ರುಡ್ ಸೆಟ್ ಸಂಸ್ಥೆಯ ಉಷಾ ಸಮಾಜ್ ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ಶಿವಾನಂದ, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.ವಲಯದ ಎಲ್ಲಾ ಒಕ್ಕೂಟದ ಪದಾಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು‌

LEAVE A REPLY

Please enter your comment!
Please enter your name here