ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ.ಎಸ್. ರಿಗೆ ಜೆಸಿಐ ಮಂಜುಶ್ರೀ ವತಿಯಿಂದ ಸನ್ಮಾನ

0

ಬೆಳ್ತಂಗಡಿ: ಬೆಳ್ತಂಗಡಿ ಜೆಸಿಐ ಮಂಜುಶ್ರೀ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ.ಎಸ್ ರವರನ್ನು ಜೆಸಿಐ ಭವನದಲ್ಲಿ ನಡೆದ ಮಧ್ಯಂತರ ಸಮ್ಮೇಳನದ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಬೆಳ್ತಂಗಡಿ ಜೆಸಿಐ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್.ಡಿ ಬಳಂಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.

ಸನ್ಮಾನ ಪತ್ರವನ್ನು ಅನುಕ್ಷಾ ಶಿರ್ಲಾಲ್ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಪ್ರತೀಕ್ ವಿ.ಎಸ್., ತಂದೆ ವಸಂತ ಶೆಟ್ಟಿ ಶ್ರದ್ದಾ, ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲಾಯಿಲ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಸುಧೀರ್ ಕೆ ಎನ್, ಶೈಲೇಶ್, ಲೇಡಿ ಜೆಸಿ ಸಂಯೋಜಕಿ ಶ್ರುತಿ ರಂಜಿತ್, ಜೇಸಿಐ ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವೀತ್ ಕುಮಾರ್ ಹಾಗೂ ಜೆಸಿ ಜೆಜೆಸಿ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here