Site icon Suddi Belthangady

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಹೆತ್ತವರ-ಪೋಷಕರ ಸಭೆಯನ್ನು ಸೇವಾ ಸಮಿತಿ ಅಧ್ಯಕ್ಷೆ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿ ಶ್ಯಾಮ್ ಪ್ರಸಾದ್, ಖಜಂಜಿ ಶಿವ ಪ್ರಸಾದ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು.ಪೋಷಕರನ್ನು ಸ್ವಾಗತಿಸಿ, ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು.

Exit mobile version