Site icon Suddi Belthangady

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16ರಂದು ನಡೆಯಿತು.

ಊರು ಪರವೂರಿನಲ್ಲಿರುವ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರಾದ ದ್ಯೆವ ನರ್ತಕ ಡಾ.ರವೀಶ್ ಪಡುಮಲೆಯವರನ್ನು ವಿಶ್ವನಾಥ ಪಡುಮಲೆಯವರು ಮತ್ತು ಕುಟುಂಬಸ್ಥರು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಶ್ ಪಡುಮಲೆ ಯವರು ನಾವೆಲ್ಲರೂ ನಮ್ಮ ಹಿರಿಯರಿಂದ ಬಂದ ದ್ಯೆವ ನರ್ತನ ಸೇವೆಯನ್ನು ನಿಷ್ಟೆಯಲ್ಲಿ, ಪ್ರಾಮಾಣಿಕವಾಗಿ ಮುಂದುವರಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಮೂಲ ಕಟ್ಟು ಕಟ್ಟಳೆಯನ್ನು ಉಳಿಸೋಣ ಎಂದು ವಿನಂತಿಸಿಕೊಂಡರು. ಉಪನ್ಯಾಸಕ ಜಗನ್ನಾಥ ಕೊಣಾಜೆ ಕಾರ್ಯಕ್ರಮ ನಿರ್ವಹಿಸಿದರು.

Exit mobile version