ಬೆಳ್ತಂಗಡಿ: ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

0

ಬೆಳ್ತಂಗಡಿ: ಬೆಳ್ತಂಗಡಿ ಜೂನಿಯರ್ ಕಾಲೇಜು ಸಮೀಪ ಶ್ರೀ ಮಂಜುನಾಥ ಕೃಪಾ ಕಟ್ಟಡದಲ್ಲಿ ನೂತನವಾಗಿ ಪ್ರಶ್ವಿನ್ ಪ್ರಿಂಟರ್ಸ್ ಜೂ.19ರಂದು ಶುಭಾರಂಭಗೊಂಡಿತು.

ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಮ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಬ್ಯಾಂಕ್ ಸ್ಥಾಪಕ ಲ|ವಿ.ಆರ್.ನಾಯಕ್, ವಾಣಿ ಶಿಕ್ಷಣ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಲಕ್ಷ್ಮಿ ನಾರಾಯಣ, ಬೆಳ್ತಂಗಡಿ ತೋಟಗಾರಿಕೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ದಿನು ಪ್ಯಾಶನ್ ಮಾಲೀಕ ದಿನೇಶ್, ನಿವೃತ್ತ ಸೈನಿಕ ದಿನೇಶ್ ಗೌಡ ಕೆ., ಕಳಿಯ ಗ್ರಾಮ ಪಂಚಾಯತ್ ಸದಸ್ಯ ವಿಜಯ ಕುಮಾರ್ ಕೆ., ಕಳಿಯ ಸಿ.ಎ.ಬ್ಯಾಂಕ್ ಮಾಜಿ ಉಪಾಧ್ಯಕ್ಷ ರಾಜೀವ ಗೌಡ ಕೆ., ರಕ್ತೇಶ್ವರಿಪದವು ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ., ಸೇಸಮ್ಮ, ಕುಟುಂಬ ವರ್ಗದವರು ಹಾಗೂ ಸ್ಥಳಿಯರು ಶುಭಹಾರೈಸಿದರು.

ನಮ್ಮಲ್ಲಿ ಜೆರಾಕ್ಸ್, ಆನ್ಲೈನ್, ಸರಕಾರಿ ಇಲಾಖೆ ಸಂಬಂಧಿಸಿದ ಎಲ್ಲಾ ಅರ್ಜಿ ಫಾರಂಗಳು ಕ್ಲಪ್ತ ಸಮಯದಲ್ಲಿ ಮಿತದರದಲ್ಲಿ ದೊರೆಯುತ್ತದೆ.ಗ್ರಾಹಕರು ಸಹಕರಿಸಿ ಬೇಕೆಂದು ಸಂಸ್ಥೆಯ ಪಾಲುದಾರ ಸುನೀಲ್ ಕುಮಾರ್ ಕೆ. ಹಾಗೂ ಸಹೋದರಿ ಪಾವನ ಪ್ರವೀಣ್ ಗೌಡ ಹೇಳಿದರು. ಕಳಿಯ ಸಿ.ಎ.ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಕೆ.ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here