Site icon Suddi Belthangady

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವು ಜೂ.19ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಜೆ.ಎಫ್.ಎಮ್ ಶಂಕರ್ ರಾವ್, ಪ್ರಾಧ್ಯಾಪಕರು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್ ಇವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸುತ್ತಾ, “ಶಾಲೆಯು ಕೇವಲ ಅಂಕಗಳನ್ನು ಪಡೆಯುವ ಯಂತ್ರಗಳನ್ನು ರಚಿಸದೆ ಒಳ್ಳೆಯ ನಾಗರಿಕರು ಹಾಗೂ ಉತ್ತಮ ನಾಯಕರನ್ನು ರೂಪಿಸುತ್ತದೆ.ಹಾಗಾಗಿ ಮಕ್ಕಳು ಉತ್ತಮ ನಾಯಕತ್ವ ಗುಣ ಹಾಗೂ ಆತ್ಮ ವಿಶ್ವಾಸದೊಂದಿಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡು ತಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಅಶ್ವಿನಿ, ಸ್ವಾಗತ ಭಾಷಣವನ್ನು ವರ್ನನ್ ಮೆಂಡೋನ್ಸಾ ಹಾಗೂ ಕವಿತಾ ಇವರು ವಂದನಾರ್ಪಣೆಗೈದರು.

Exit mobile version