Site icon Suddi Belthangady

ಜುಲೈ 13: ಸುರತ್ಕಲ್ಲಿನಲ್ಲಿ ದ.ಕ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನವು ಸುರತ್ಕಲ್ಲಿನ ಗೋವಿಂದಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 13ರಂದು ನಡೆಯಲಿರುವುದು.

ಹರಿಕೃಷ್ಣ ಪುನರೂರು, ಪ್ರದೀಪ ಕುಮಾರ ಕಲ್ಕೂರು , ಡಾ|ಎಂ.ಬಿ ಪುರಾಣಿಕ್, ಗಮಕ ಕಲಾಪರಿಷತ್ತು ಜಿಲ್ಲಾಧ್ಯಕ್ಷ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ತಾಲೂಕು ಅಧ್ಯಕ್ಷ ಗಮಕಿ ಸುರೇಶ್ ರಾವ್ ಅತ್ತೂರು, ಸದಸ್ಯರು ಇನ್ನೂ ಹಲವು ಗಮಕ ಕಲಾ ಅಭಿಮಾನಿಗಳು ಸೇರಿದ ಸಭೆಯಲ್ಲಿ ದ.ಕ.ಜಿಲ್ಲೆಯ ಖ್ಯಾತ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ದಕ್ಷಿಣ ಕನ್ನಡ ಜಿಲ್ಲಾ ಗಮಕ ಪರಿಷತ್ ಅಧ್ಯಕ್ಷ ಪ್ರೊ.ಮಧೂರು ಮೋಹನ ಕಲ್ಲೂರಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Exit mobile version