ಧರ್ಮಸ್ಥಳದಲ್ಲಿ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜೂ.21ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಪ್ರಮೀಳಾ ಹೆಲ್ತ್ ಕೇರ್ ಸರ್ವೀಸ್ ನ ಡಾ.ಜಾನ್ ಎಬ್ ನೇಜರ್, ತುಮಕೂರು ಶ್ರೀ ಸಿದ್ದಾರ್ಥ ಅಕಾಡೆಮಿ ಸಂಸ್ಥೆಯ ಉಪ ಸಭಾಪತಿ ಡಾ.ಕೆ.ಬಿ.ಲಿಂಗೇ ಗೌಡ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಶ್ರೀ ಧ.ಮ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಸುಧಾಕರ ಕೊಟ್ಟಾರಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮೈಸೂರಿನ ಕು.ಕುಶಿ ಎಚ್. ರವರಿಗೆ ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಧ.ಮ.ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಯೋಗ ನಿರ್ದೇಶಕ ಡಾ.ಶಶಿಕಾಂತ್ ಜೈನ್, ಡೀನ್ ಡಾ.ಶಿವಪ್ರಸಾದ್ ಶೆಟ್ಟಿ, ಡಾ.ಸುಜಾತಾ ಕೆ.ಜೆ ಕಾರ್ಯಕ್ರಮದ ಮೊದಲು ವಿವಿಧ ಯೋಗ ಪ್ರದರ್ಶನ ನಡೆಯಿತು.

ಅನನ್ಯ ಜೈನ್ ಮತ್ತು ಡಾ.ಕಾರ್ತಿಕ್ ರಾಮಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here