Site icon Suddi Belthangady

ಮೂಡುಕೋಡಿ: ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶ್ವ ಯೋಗ ದಿನಾಚರಣೆ

ಮೂಡುಕೋಡಿ: ಇಲ್ಲಿಯ ನಡ್ತಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶ್ವ ಯೋಗ ದಿನ ಆಚರಣಾ ಪ್ರಯುಕ್ತ ಯೋಗಾಸನ ಕಾರ್ಯಕ್ರಮ ನಡೆಯಿತು.ಸುಪ್ರಿತಾ ಸಂಜಯ್ ಆಗಮಿಸಿ ಯೋಗದ ಮಹತ್ವವನ್ನು ತಿಳಿಸಿ ಯೋಗಾಸನಗಳನ್ನು ಮಾಡಿಸಿದರು.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಪುರುಷೋತ್ತಮ ರಾವ್, ವೇಣೂರು ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಬಿಜೆಪಿ ತಾಲೂಕು ಹಿಂದುಳಿದ ಮೋರ್ಚಾ ಉಪಾಧ್ಯ ರಾಜೇಶ್ ಪೂಜಾರಿ ಮೂಡುಕೋಡಿ, ರೈತ ಮೋರ್ಚಾ ಮಂಡಲ ಸದಸ್ಯ ಹರೀಶ್.ಪಿ.ಎಸ್, ಶಕ್ತಿ ಕೇಂದ್ರ ಅಧ್ಯಕ್ಷ ಉಮೇಶ್ ನಡ್ತಿಕಲ್ಲು, ಭಜನಾ ಮಂದಿರದ ಅಧ್ಯಕ್ಷ ಪ್ರವೀಣ್ ಆಚಾರ್ಯ, ಮೂಡುಕೋಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಕಾಶ್ ಭಟ್, ಉಪಾಧ್ಯಕ್ಷ ಸದಾನಂದ ಪೂಜಾರಿ, ಮೂಡುಕೋಡಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಧನಂಜಯ್ ಜೈನ್, ಯೋಗೀಶ್ ನಡ್ತಿಕಲ್ಲು,. ಮೊದಲಾದವರು ಉಪಸ್ಥಿತರಿದ್ದರು.

Exit mobile version