Site icon Suddi Belthangady

ಉಜಿರೆ: ಬಿಜೆಪಿ ಮಹಾಶಕ್ತಿ ಕೇಂದ್ರದ ವಿಶ್ವ ಯೋಗ ದಿನಾಚರಣೆಗೆ ಶಾಸಕ ಹರೀಶ್ ಪೂಂಜ ಭಾಗಿ

ಉಜಿರೆ: ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಜೂ.21ರಂದು ಶಾರದಾ ಮಂಟಪದಲ್ಲಿ ಯೋಗ ದಿನ ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ್ ವಿನಯಚಂದ್ರ ಉಜಿರೆ, ಪ್ರಶಾಂತ್ ಉಜಿರೆ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನಾವೂರು, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು, ಪ್ರ.ಕಾರ್ಯದರ್ಶಿ ನಿರಂಜನ್ ಶೆಟ್ಟಿ ಉಜಿರೆ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಸದಸ್ಯೆ ಶಶಿಕಲಾ ಉಜಿರೆ, ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ದೇವಪ್ಪಗೌಡ ಉಜಿರೆ ಮತ್ತಿತರರು ಭಾಗವಹಿಸಿದ್ದರು‌.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಯೋಗ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೀನಿವಾಸ ರಾವ್ ಯೋಗದ ಪರಿಚಯ ಹೇಳಿದರು.

Exit mobile version