Site icon Suddi Belthangady

ಕಲ್ಲೇರಿ: ಸರಕಾರಿ ಹಿ.ಪ್ರಾ.ಶಾಲೆಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರಿಂದ ಶೌಚಾಲಯಕ್ಕೆ ಅನುದಾನ

ಕಲ್ಲೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ರವರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರ ಮುತುವರ್ಜಿಯಲ್ಲಿ ಮಂಜೂರಾದ, ರೂ. 2 ಲಕ್ಷ ದಲ್ಲಿ ನಿರ್ಮಾಣವಾದ ಶೌಚಾಲಯದ ಲೋಕಾರ್ಪಣೆ ಮತ್ತು ಶಾಲಾಭಿವೃದ್ಧಿ ಸಮಿತಿ ಸಭೆ ಜೂ.19ರಂದು ನಡೆಯಿತು.

ಅಧ್ಯಕ್ಷತೆಯನ್ನು ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್ ವಹಿಸಿದ್ದರು.

ಅತಿಥಿಗಳಾಗಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಜಯವಿಕ್ರಮ್, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಅಯೂಬ್ ಡಿ. ಕೆ., ಸದಸ್ಯರಾದ ನಿಶಾರ್ ಕುದ್ರಡ್ಕ, ಲೀಲಾವತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆಶ್ರಫ್ ಕಲ್ಲೇರಿ, ಮುಖ್ಯ ಶಿಕ್ಷಕಿ ಉಷಾ, ಶಾಭಿವೃದ್ಧಿ ಸಮಿತಿ ಸದಸ್ಯರಾದ ಸಾದಿಕ್, ಮೇದಪ್ಪ ಗೌಡ, ಗುತ್ತಿಗೆದಾರ ಯೋಗೀಶ್ ಆಲಕ್ಕೆ, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು.

ಶಿಕ್ಷಕ ಚೇತನ್ ಕಾರ್ಯಕ್ರಮ ನಿರೂಪಿಸಿದರು.

Exit mobile version