Site icon Suddi Belthangady

ಪೆರಿಂಜೆ: ಸರಕಾರಿ ಶಾಲಾ ಮಕ್ಕಳಿಗೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

ಪೆರಿಂಜೆ: ಸರಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳಿದ್ದು ನಮ್ಮೂರ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಪಡ್ಯಾರಬೆಟ್ಟದ ಧರ್ಮದರ್ಶಿ ಜೀವಂದರ್ ಕುಮಾರ್ ಕರೆ ನೀಡಿದರು.

ಪಡ್ಯಾರಬೆಟ್ಟದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರಕಾರಿ ಶಾಲೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಪಡ್ಯಾರಬೆಟ್ಟು ಕ್ಷೇತ್ರದಿಂದ ಪ್ರತಿ ವರ್ಷವೂ ಸ್ಥಳೀಯ ಗ್ರಾಮೀಣ ಶಾಲೆಗಳಿಗೆ ಗೌರವ ಶಿಕ್ಷಕಿ ಹಾಗೂ ಉಚಿತ ಬರೆಯುವ ಪುಸ್ತಕಗಳನ್ನು ಅನೇಕ ವರ್ಷಗಳಿಂದ ನೀಡಲಾಗುತ್ತಿದೆ.

ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪಂಚಾಯತ್ ಸದಸ್ಯೆ ಶಾಂತ, ಶಾಲಾ ಎಸ್ ಡಿಎಮ್ ಸಿ ಅಧ್ಯಕ್ಷ ರಾಜೇಶ್, ಎಸ್.ಡಿ.ಎಂ.ಸಿ ಸದಸ್ಯರು ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ನೀನಾ ಕುವೆಲ್ಲೋ ಸ್ವಾಗತಿಸಿ, ಶಿಕ್ಷಕ ರಾಜೇಶ್ ವಂದಿಸಿದರು, ವಿಶ್ವನಾಥ್ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Exit mobile version