Site icon Suddi Belthangady

ಬೆಳಾಲು: ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ವಾರಿಜ ಎಸ್.ಗೌಡರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ಶುಭಹಾರೃಸಿ ಮಾತನಾಡುತ್ತಾ, ಯೋಗ ನಮ್ಮ ದೇಶದ ಮೌಲ್ಯ ಸಂಪತ್ತು. ಇಂತಹ ಯೋಗ ಸಂಪತ್ತಿನ ಮೂಲಕ ನಾವು ವೈಯಕ್ತಿಕ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಮಾರ್ಗದರ್ಶಕ ಶಾರೀರಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದರವರು ಸ್ವಾಗತಿಸಿ, ವಿದ್ಯಾರ್ಥಿಗಳಾದ ಹೇಮಲತಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Exit mobile version