Site icon Suddi Belthangady

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಜೂ.21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರ ಸತೀಶ್ ಆಚಾರ್ಯ ಇವರು ಉಪಸ್ಥಿತರಿದ್ದರು.

ಇವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ ರೀತಿಯಲ್ಲಿ ಪ್ರಾಣಾಯಾಮ ಮತ್ತು ವಿವಿಧ ರೀತಿಯ ಆಸನಗಳನ್ನು ಮಾಡಿಸಿದರು.ಶಾಲಾ ಸಂಚಾಲಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್ ಇವರು ಯೋಗಾಸನದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಯಾಗಿ ಗೋವರ್ಧನ್ ಹೆಚ್.ಸಿ ಎಸ್‌ಸಿ ಗೌವರ್ನೆನ್ಸ್ ಇಂಡಿಯನ್ ಸರ್ವಿಸಸ್ ಲಿಮಿಟೆಡ್ ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಓಮನ ಹಾಗೂ ಪವನ್ ಸೀನಿಯರ್ ಎಕ್ಸಿಕ್ಯೂಟಿವ್ ಎಸ್ ಬಿ ಐ ಜನರಲ್ ಇನ್ಸೂರೆನ್ಸ್ ಮಂಗಳೂರು ಮತ್ತು ಹರಿಣಾಕ್ಷಿ ಸಿಎಸ್ಸಿ ಸೆಂಟರ್ ನಾರಾವಿ ಇವರು ಕೂಡ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿ ಯೋಗಾಸನದಿಂದ ಆಗುವ ಉಪಯೋಗವನ್ನು ತಿಳಿಸಿದರು. ಈ ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸುಜಾತ ನಿರೂಪಿಸಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದ ಸಮರ್ಪಿಸಿದರು. ಎಲ್ಲಾ ಶಿಕ್ಷಕ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Exit mobile version