Site icon Suddi Belthangady

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ವಾಣಿಜ್ಯ ಕಟ್ಟಡ “ಶ್ರೀ ಗುರು ಸಾನಿಧ್ಯ” ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕೇಂದ್ರ ಕಛೇರಿ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ ಜುಲೈ 13ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯಯನ್ನು ಜೂ.22ರಂದು ಶ್ರೀ ಗುರುದೇವ ವಿವಿಧೋದ್ದೇಶದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಸಂಘದ ಅಧ್ಯಕ್ಷ ಎನ್‌.ಪದ್ಮನಾಭ ಮಾಣಿಂಜ, ಉಪಾಧ್ಯಕ್ಷ ಭಗೀರಥ.ಜಿ, ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಾಯಣಾಧಿಕಾರಿ ಅಶ್ವತ್ಥ ಕುಮಾರ್, ಆಡಳಿತ ಮಂಡಳಿ ನಿರ್ದೇಶಕಿ ಸುಜಿತಾ ವಿ.ಬಂಗೇರ, ಸಂಜೀವ ಪೂಜಾರಿ, ತನುಜಾ ಶೇಖರ್, ಕೆ.ಪಿ.ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಜಯವಿಕ್ರಮ.ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಡಾ.ರಾಜಾರಾಮ್ ಕೆ.ಬಿ. ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version