Site icon Suddi Belthangady

ಗೇರುಕಟ್ಟೆ: ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

ಬೆಳ್ತಂಗಡಿ: ಕಳಿಯ ಗ್ರಾಮದ ಬೆಳ್ತಂಗಡಿ ಹೂವಿನ ವ್ಯಾಪಾರಿ ಮೇರ್ಲ ಶಿವರಾಮ ಪೂಜಾರಿ ಇತ್ತೀಚಿಗೆ ಅಪಘಾತದಲ್ಲಿ ಗಾಯಗೊಂಡ ಅವರ ಆರೋಗ್ಯ ಚಿಕಿತ್ಸೆಗಾಗಿ ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘದ ವತಿಯಿಂದ ಮನೆಗೆ ಭೇಟಿ ನಗದು ಧನ ಸಹಾಯ ನೀಡಿದರು ಹಾಗೂ ಬೇಗನೆ ಗುಣಮುಖರಾಗಿ ಎಂದು ಸಂಘದ ಸದಸ್ಯರು ಹಾರೈಸಿ ಮಾನವೀಯತೆ ಮೆರೆದರು.

ಮೆ.5 ರಂದು ರಾತ್ರಿ ಮನೆಗೆ ಬರುವಾಗ ಗುರುವಾಯನಕೆರೆ ವಾಹನ ಅಪಘಾತದಲ್ಲಿ ಗಂಭೀರವಾದ ಗಾಯಗೊಂಡರು.ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಅಗಿದೆ. ಈಗಾಗಲೇ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಗೇರುಕಟ್ಟೆ ಚಾಲಕ-ಮಾಲಕರ ಸಂಘ ಸ್ಥಳೀಯ ಹಲವಾರು ಸಂಘ,ಸಂಸ್ಥೆಗಳ ಜೊತೆಯಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಿ ಕೊಂಡು ಬರುತ್ತಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೊಟ್ಟು, ಪ್ರಧಾನ ಕಾರ್ಯದರ್ಶಿ ಸಿದ್ಧೀಕ್ ಜಿ.ಹೆಚ್, ಸುಣ್ಣಲಡ್ಡ, ಜೊತೆ ಕಾರ್ಯದರ್ಶಿ ಲೋಕಿತ್,ಸಂಘದ ಸದಸ್ಯರಾದ ಗೋಪಾಲ್ ನಾಯ್ಕ್ ಬನ,ವಸಂತ ಶೆಟ್ಟಿ ಮಾವಿನಕಟ್ಟೆ, ರಮೇಶ ಪೂಜಾರಿ ವಂಜಾರೆ, ಶೇಕುಂಞಿ ಸುಣ್ಣಲಡ್ಡ,ಅಬುಬಕ್ಕರ್ ಪದಗೋಳಿ, ಸಂದೀಪ್ ಪೂಜಾರಿ ಪಂಚಮಾಲಕೋಡಿ, ರತ್ನಾಕರ ಪೂಜಾರಿ ಬಳ್ಳಿದಡ್ಡ, ತಾರಾನಾಥ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಗೇರುಕಟ್ಟೆ, ಕೀರ್ತಿ ಗೇರುಕಟ್ಟೆ ಉಪಸ್ಥಿತರಿದ್ದರು.

Exit mobile version