ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಜೂ.21ರಂದು ಹಮ್ಮಿಕೊಳ್ಳಲಾಯಿತು.ವಿವಿಧ ಸಂಘಗಳ ಉದ್ಘಾಟನೆಯನ್ನು ಶಾಲೆಯ ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷ ಅಬ್ದುಲ್ ಗಪೂರ್ ಉದ್ಘಾಟಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಬ್ದುಲ್ ಗಪೂರ್ ರವರು ವಿವಿಧ ಸಂಘಗಳು ಶಾಲೆಯಲ್ಲಿದ್ದಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡ ರವರು ವೈಯಕ್ತಿಕವಾಗಿ ಸಾಧನೆ ಮಾಡಲು ಆಗದನ್ನು ಸಂಘಗಳ ಮೂಲಕ ಸಾಧಿಸಿ ತೋರಿಸಬಹುದು ಇದರ ಉದ್ದೇಶದಿಂದ ಶಾಲೆಯಲ್ಲಿ ಕೃಷಿ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಸಾಂಸ್ಕೃತಿಕ ಸಂಘ, ಮೀನಾ ಸಂಘಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ವಿವಿಧ ಸಂಘಗಳ ಮಹತ್ವವನ್ನು ಶಾಲೆಯ ಶಿಕ್ಷಕ ಪವನ್ ಕುಮಾರ್ ರವರು ವಿವರಿಸಿದರು.ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಸುಜಾತಾ ರವರು ಸ್ವಾಗತಿಸಿ, ವೇದಾವತಿ ಧನ್ಯವಾದಿಸಿ, ಶಿಕ್ಷಕಿ ಪುಷ್ಪಲತಾ ರವರು ನಿರೂಪಿಸಿದರು.

LEAVE A REPLY

Please enter your comment!
Please enter your name here