ನಿವೃತ್ತ ಸರ್ಕಾರಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

0

ಬೆಳ್ತಂಗಡಿ: ಬೆಳ್ತಂಗಡಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ.ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು.

ವಿಶೇಷ ಅತಿಥಿಯಾಗಿ ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ ಯವರು ಭಾಗವಹಿಸಿದ್ದರು.

ನಿರ್ದೇಶಕ ಹರಿಪ್ರಸಾದ್ ರವರು ಸ್ವಾಗತಿಸಿ, ನಿರ್ದೇಶಕ ಚಂದ್ರಶೇಖರ್ ಸನ್ಮಾನ ಪತ್ರ ವಾಚಿಸಿದರು.ನಿರ್ದೇಶಕ ಪ್ರಶಾಂತ್ ಕುಮಾರ್ ರವರು ವಂದನಾರ್ಪಣೆ ಮಾಡಿದರು.ಸಲಹೆಗಾರ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಆರತಿ, ಜಯರಾಜ್ ಜೈನ್, ವಾರಿಜ, ಹೇಮಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲ ಜ್ಯೋತಿರಾಜ್, ವಿಶಾಲ್, ಶ್ರೀ ಧನಕೀರ್ತಿ ಜೈನ್, ಸನತ್ ಕುಮಾರ್, ರಶ್ಮಿ, ಸಂಗೀತ, ಸೌಮ್ಯ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here