ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ಉದ್ಘಾಟನೆ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮವು ಜೂನ್ 25ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಎಸ್ ಡಿ ಯಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯ ಕುಮಾರ್ ಇವರು ಆಗಮಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಪಠ್ಯದ ಜೊತೆಗೆ ಪೂರಕವಾದ ಇತರ ಚಟುವಟಿಕೆಗಳಿಗೂ ಹೆಚ್ಚಿನ ಗಮನ ಕೊಡಬೇಕು.ಇದು ಊಟದ ಜೊತೆ ಉಪ್ಪಿನಕಾಯಿ ಇದ್ದoತೆ. ವಿದ್ಯಾರ್ಥಿಗಳು ಸಿಕ್ಕಿದ್ದನ್ನು ಹೆಕ್ಕಿ ತಿನ್ನುವ ಪಕ್ಷಿಗಳಾಬೇಕು. ಓದುವ ಹವ್ಯಾಸವನ್ನು ಹೆಚ್ಚು ಬೆಳೆಸಿಕೊಂಡು ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ಶಾಲಾ ಮುಖ್ಯ ಶಿಕ್ಷಕ ಕಮಲ್ ತೇಜು ರಜಪೂತ ಇವರು ಕಾರ್ಯಕ್ರಮಕ್ಕೆ ಶುಭ ಕೋರಿದರು.ಯಕ್ಷಗಾನ ತರಬೇತುದಾರರಾದ ಲಕ್ಷ್ಮಣ ಗೌಡ ಬೆಳಾಲು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಪ್ರಾರ್ಥನೆ, ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಈ ಕಾರ್ಯಕ್ರಮವನ್ನು ಶಿಕ್ಷಕಿ ಸೀಮಾ ವಂದಿಸಿದರು. ಶಿಕ್ಷಕಿ ಶ್ರೀಜಾ ನಿರೂಪಿಸಿದರು.

LEAVE A REPLY

Please enter your comment!
Please enter your name here