ಉಜಿರೆಯಲ್ಲಿ ಮಹಿಳೆಗೆ ಹಲ್ಲೆ ಪ್ರಕರಣ: ನವೀನ್ ಕನ್ಯಾಡಿ ಬಂಧನ

0

ಬೆಳ್ತಂಗಡಿ: ಉಜಿರೆಯಲ್ಲಿ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿದ ಆರೋಪದಡಿ ನವೀನ್ ಕನ್ಯಾಡಿ ಎಂಬಾತನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆ ನವೀನ್​ಗೆ 7 ಲಕ್ಷ ರೂಪಾಯಿ ಸಾಲ ಕೊಟ್ಟಿದ್ದರು ಎನ್ನಲಾಗಿದ್ದು ಹಣ ವಾಪಸ್‌‌ ಕೊಡುವಂತೆ ಕೇಳಿದ್ದಕ್ಕೆ ರೊಚ್ಚಿಗೆದ್ದ ನವೀನ್‌‌ ಅಂಗಡಿಗೆ ಬಂದು ಮಹಿಳೆಗೆ ಅವಾಚ್ಯವಾಗಿ ಬೈದು, ಹಲ್ಲೆ ಮಾಡಿದ್ದಾನೆ ಎಂದು‌ ಆರೋಪಿಸಲಾಗಿದೆ.

ಮಹಿಳೆ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 354,447,504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ನವೀನ್ ಕನ್ಯಾಡಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಠಾಣಾ ನಿರೀಕ್ಷಕ ಸುಬ್ಬಾಪರಮಠ್ ನೇತೃತ್ವದ ಪೊಲೀಸರ ತಂಡ ಆರೋಪಿಯ ವಿಚಾರಣೆ ನಡೆಸುತ್ತಿದೆ ಎಂದು‌ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here