ಕೊಕ್ಕಡ: ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

0

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕೊಕ್ಕಡ ವಲಯ ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ|ಮೋಹನ ದಾಸರವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಷಾ ರವರು ತಗಟೆ ಸೊಪ್ಪಿನ ದೋಸೆಯನ್ನು ಹೊಯ್ದು ಆಹಾರದಲ್ಲಿರುವಂತಹ ಪೋಷಕಾಂಶಗಳ ಬಳಕೆಯನ್ನು ಹೇಗೆ ಮಾಡಬೇಕು ಎಂಬುವುದರ ಬಗ್ಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮನ್ವಯುಧಿಕಾರಿ ಮಧುರ ವಸಂತ್ ರವರು ಜ್ಞಾನವಿಕಾಸ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಹಿಂದಿನ ಕಾಲದಲ್ಲಿ ಸೇವಿಸುತ್ತಿದ್ದ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿಯನ್ನು ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಅಧ್ಯಕ್ಷ ಕುಶಾಲಪ್ಪ ಗೌಡ ಹಾಗೂ ಉಪಾಧ್ಯಕ್ಷ ರಮೇಶ್ ಗೌಡರವರು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ರೋಹಿಣಿ ನಿರೂಪಿಸಿ, ಶೋಭಾ ಸ್ವಾಗತಿಸಿ, ಭವಾನಿ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here