ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ.ಅವರಿಗೆ ಸನ್ಮಾನ

0

ಉಜಿರೆ: ಉಜಿರೆಯ ಸುರಕ್ಷಾ ಮೆಡಿಕಲ್ಸ್ ನ ಮಾಲೀಕರು, ಸೇವಾಭಾರತಿ ಕನ್ಯಾಡಿ ಇದರ “ಅರೋಗ್ಯಂ” ವಿಭಾಗದ ಮುಖ್ಯಸ್ಥರು ರೊ.ಶ್ರೀಧರ ಕೆ.ವಿ. ಅವರನ್ನು ಜೂ. 30ರಂದು ಮಡಿಕೇರಿಯಲ್ಲಿ ನಡೆದ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.


ಶ್ರೀಧರ ಕೆ.ವಿ ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂಧರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ.

ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.
ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್, ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕ ಭಾಗೋಜಿ ಟಿ.ಖಾನಾಪುರೆ, ಉಪ ಔಷಧ ನಿಯಂತ್ರಕ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here