ಗುರಿಪಳ್ಳದ ಅಂಬಡಬೆಟ್ಟು ಸೇತುವೆ ಶಿಥಿಲ- ಘನವಾಹನ ಸಂಚಾರಕ್ಕೆ ನಿರ್ಬಂಧ- ಡಿ.ಸಿ ಆದೇಶ

0

ಬೆಳ್ತಂಗಡಿ: ತಾಲೂಕಿನ ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯ 1 ಕಿ ಮೀ ದೂರದಲ್ಲಿರುವ ಅಂಬಡಬೆಟ್ಟು ಸೇತುವೆಯು ಶಿಥಿಲಾವಸ್ಥೆಯಲ್ಲಿ ಇದ್ದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಉಜಿರೆ – ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ, ಸುರ್ಯ ದೇವಸ್ಥಾನ ಮಾರ್ಗವಾಗಿ,ಕೇಳ್ತಾಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ- ಕಿಲ್ಲೂರು-ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ ಕಾಲೋನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ, ರಾಜ್ಯ ಹೆದ್ದಾರಿ-276 ರಸ್ತೆಯಾದ ಧರ್ಮಸ್ಥಳ, ಮುಂಡಾಜೆ, ದಿಡುಪೆ ರಸ್ತೆಯನ್ನು ಸಂಪರ್ಕಿಸುವಂತೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here