ನಾರಾವಿ: ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

0

ನಾರಾವಿ: ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಯಂತ್ರ ಬ್ಯಾಂಕ್ ಮ್ಯಾನೇಜರ್ ಉಮೇಶ್ ರವರು ಮಾತನಾಡಿ ಯೋಜನೆಯು ಭತ್ತ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸಿ.ಹೆಚ್.ಎಸ್.ಸಿ ಕೇಂದ್ರದಲ್ಲಿ ಭತ್ತ ಕೃಷಿಗೆ ಯೋಗ್ಯ ವಾದ ಉಳುಮೆಗೆ, ನಾಟಿ ಕಟಾವುಗೆ ಕಡಿಮೆ ಬಾಡಿಗೆದರದಲ್ಲಿ ಮಷಿನ್ ಲಭ್ಯವಿದ್ದು ಹೆಚ್ಚಿನ ರೈತರು ಇದರ ಉಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಭತ್ತ ಕೃಷಿಗೆ ಸಸಿ ಮಡಿ ತಯಾರಿಸಿ ನಾಟಿಗೆ ಯೋಗ್ಯವಾದ ಉತ್ತಮ ಭತ್ತದ ತಳಿ ಆಯ್ಕೆ ಮಾಡಿ ಉತ್ತಮ ಗುಣಮಟ್ಟದ ಸಸಿ ಮಡಿಯನ್ನು ಯೋಜನೆಯಿಂದ ತರಬೇತಿ ಪಡೆದು ಪ್ರಶಾಂತ್ ಚಿತ್ತಾರ ರವರು ಕೇಂದ್ರೀಕ್ರತ ನರ್ಸರಿ ಮೂಲಕ ರೈತರಿಗೆ ಕಡಿಮೆದರದಲ್ಲಿ ಸಸಿ ಮಡಿ ನೀಡುತ್ತಿದ್ದಾರೆ.ಇದರ ಪ್ರಯೋಜನವನ್ನು ರೈತರು ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಭತ್ತ ಕೃಷಿ ಮಾಡುವಂತೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕ ಕೃಷ್ಣ ಗೌಡ, ಹಾಲು ಉತ್ಪಾದಕ ಸಂಘದ ನಿರ್ದೇಶಕರು ಸುಮನ್ ಹೆಗ್ಡೆ, ಸುಧಾಕರ್ ಪೂಜಾರಿ, ಯಂತ್ರಶ್ರೀ ಯೋಧ ಪ್ರಶಾಂತ್, ಧರಣೆಪ್ಪ ಪೂಜಾರಿ, ಅಣ್ಣಿ ಪೂಜಾರಿ, ಕೇಶವ ಪೂಜಾರಿ, ನೀಲಯ್ಯ, ಸುಮಿತ್ರಾ, ಕಮಲಾಕ್ಷಿ, ಈರಮ್ಮ, ಸುಶೀಲ, ಚಂದ್ರಪ್ಪ, ಯಶೋಧ, ವಶಾಂತಿ, ಯಂತ್ರ ಚಾಲಕ ಪುರಂದರ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here