ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಮತ್ತು ಜಿಲ್ಲಾ ರೈತ ಮೋರ್ಚಾ ದಕ್ಷಿಣ ಕನ್ನಡ ಇದರ ನೇತೃತ್ವದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆಗೊಳಿಸುವ ಬಗ್ಗೆ ಹಾಗೂ ಪ್ರೆಟೋಲ್, ಡಿಸೇಲ್ ದರ ಹೆಚ್ಚಳ ಮಾಡಿದ ಕುರಿತು ಜು.02ರಂದು ಜಿಲ್ಲಾಮಟ್ಟದ ಬೃಹತ್‌ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಿತು.

ನಂತರ ರಾಜ್ಯ ಸರ್ಕಾರಕ್ಕೆ ಹಾಲಿನ ದರ ಏರಿಕೆಯನ್ನು ಹಿಂಪಡೆಯಲು ಹಾಗೂ ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆಗೆ ಗೊಳಿಸುವಂತೆ ಉಪತಹಶೀಲ್ದಾ‌ರ್ ರವಿಕುಮಾ‌ರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷ ವಿಜಯ ಗೌಡ, ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರು ಗಣೇಶ್‌ ಗೌಡ ನಾವೂರು, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್, ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿನೇಶ್ ಚಾರ್ಮಾಡಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವಮೋರ್ಚಾದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಶಿಧ‌ರ್ ಕಲ್ಮಂಜ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.

LEAVE A REPLY

Please enter your comment!
Please enter your name here