ಗುರುವಾಯನಕೆರೆ: ಪಣೆಜಾಲು ನಿವಾಸಿ ಸತೀಶ್ ಆತ್ಮಹತ್ಯೆಗೆ ಶರಣು

0

ಗುರುವಾಯನಕೆರೆ: ಪಣೆಜಾಲು ನಿವಾಸಿಯಾಗಿರುವ ಸತೀಶ್ ಕುಲಾಲ್(33 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 2ರಂದು ಮಧ್ಯಾಹ್ನ ನಡೆದಿದೆ.

ಮೃತರ ಹೆಂಡತಿ ಶಿಶು ಮಂದಿರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕೆಲಸದಿಂದ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪಿಕಪ್ ವಾಹನದಲ್ಲಿ ವೃತ್ತಿಯನ್ನು ಮಾಡುತ್ತಿದ್ದ ಇವರು ಇಂದು ಜು.02 ರಂದು ಹೊಸ ವಾಹನವನ್ನು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ

ಮೃತರು ಪತ್ನಿ ಮಂಜುಳಾ, ಒಂದು ಮಗು, ತಂದೆ- ತಾಯಿ, ಸಹೋದರರನ್ನು ಆಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here