Site icon Suddi Belthangady

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಸವಿತಾ ಎರ್ಮಾಳ್ ಭೇಟಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಸವಿತಾ ಎರ್ಮಾಳ್ ಭೇಟಿ ನೀಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡುತ್ತಾ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಒಳಗಾಗದೆ ರಾಷ್ಟ್ರೀಯ ಪ್ರಜ್ಞೆಯನ್ನು ಬೆಳೆಸಿಕೊಂಡು ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವು ಇನ್ನೊಬ್ಬರಿಗೆ ಆದರ್ಶವಾಗಿರಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್, ಎನ್ಎಸ್ಎಸ್ ಸಹ ಕಾರ್ಯಕ್ರಮ ಅಧಿಕಾರಿ ದೀಕ್ಷಾ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version