ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25,000/- ಸಹಾಯಧನ ವಿತರಣೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ನಾಗವೇಣಿ ಸ್ವ-ಸಹಾಯ ಸಂಘದ ಸುನೀತಾ ರವರಿಗೆ ಕಾಲಿನ ರಕ್ತವಾತ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದು ಸದ್ರಿ ಕಾಯಿಲೆ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದ ರೂ.25,000/- ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮುಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ಬೆಳಾಲು ಘಟಕದ ಸ್ವಯಂ ಸೇವಕರಾದ ಸುದೀರ್, ರವೀಂದ್ರ, ಸಂದೇಶ್, ರಾಘವೇಂದ್ರ, ಮೇಲ್ವಿಚಾರಕಿ ವನಿತ ಹಾಗೂ ಸೇವಾ ಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here