Site icon Suddi Belthangady

ಧರ್ಮಸ್ಥಳ: ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 2024-2025ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮವು ಜುಲೈ 3ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಸರಕಾರದ ರಾಜ್ಯಪಾಲೆ ಜಯಶ್ರೀ ಜೈನ್ ಇವರು ಶಾಲಾ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲದ ಸದಸ್ಯರಿಗೆ ಗೌಪ್ಯತೆ ಹಾಗೂ ಕರ್ತವ್ಯದ ಪ್ರಮಾಣವಚನ ಬೋಧಿಸಿ, ಸರಕಾರ ಕಾರ್ಯ ನಿರ್ವಹಿಸಬೇಕಾದ ಬಗೆಗೆ ಮಾರ್ಗದರ್ಶನ ನೀಡಿದರು.

ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಾಲಾ ಸರಕಾರ ನಡೆಯಬೇಕಾದ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ನಾಯಕ ಹಾಗೂ ಮುಖ್ಯಮಂತ್ರಿ ನಿಶಾಂತ್ ತನ್ನ ಯೋಜನೆಗಳನ್ನು ಸದನದ ಮುಂದಿರಿಸಿದರು. ವಿರೋಧ ಪಕ್ಷದ ನಾಯಕ ಶಶಾಂಕ್ ಡಿ ಪ್ರತಿವಂದನೆ ಸಲ್ಲಿಸಿ, ಸರಕಾರದ ಕಾರ್ಯದಲ್ಲಿ ಸಹಕಾರದ ಮಾತುಗಳನ್ನಾಡಿದರು.

ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿ, ಧನಂಜಯ ವಂದಿಸಿ, ಸಭಾಪತಿ ಕು|ಶ್ರಾವ್ಯ ನಿರೂಪಿಸಿದರು.

Exit mobile version