ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾಕ್ಟರ್ ಬಿದನ್ ಚoದ್ರ ರಾಯ್ ಇವರ ಜನ್ಮದಿನ ಹಾಗೂ ಪುಣ್ಯಸ್ಮರಣೆಯ ದಿನವಾಗಿರುವ ಜುಲೈ ಒಂದನ್ನು ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತಿದ್ದು ಅವರ ಸೇವಾ ತತ್ಪರತೆಯನ್ನು ತಿಳಿಸಿ ನಮ್ಮ ಆರೋಗ್ಯವನ್ನು ಕಾಪಾಡುವ ವೈದ್ಯರಿಗೆ ಗೌರವವನ್ನು ಸಲ್ಲಿಸುವ ಈ ದಿನದ ಮಹತ್ವವನ್ನು ತಿಳಿಸಿದರು.

ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here