ಗುರಿಪಳ್ಳ-ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

0

ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ನೂರಾರು ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗಿರುತ್ತದೆ ಆದುದರಿಂದ ಇಂದು ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕರನ್ನು ಬೇಟಿಯಾಗಿ ಬಸ್ ಸಂಚಾರ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯ ಮೂಲಕ ಒದಗಿಸಿಕೊಡುವಂತೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಘಟಕ ವ್ಯವಸ್ಥಾಪಕರು ನಾಳೆಯೇ ಗುರಿಪಳ್ಳಕ್ಕೆ ಬಸ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪೂರಕವಾದ ಆದೇಶವನ್ನು ಕೂಡ ಸಂಬಂಧಪಟ್ಟವರಿಗೆ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಯಶೋಧರ ಗೌಡ ಕೊಡ್ಡೋಲು, ಗುರುರಾಜ್ ಗುರಿಪಳ್ಳ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here