Site icon Suddi Belthangady

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಕವಿತಾ ಉಮೇಶ್ ರಿಗೆ ಕನ್ನಡ ಸ್ವಾಭಿಮಾನ ಗೌರವ ಪ್ರಶಸ್ತಿ

ಉಜಿರೆ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಉಜಿರೆ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ಇವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’ ನೀಡಿ ಸನ್ಮಾನಿಸಲಿದ್ದಾರೆ.ಜು.21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

Exit mobile version