ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ರವರ ನಿಧನಕ್ಕೆ ಸಹಾಯಕ ಖಾಝಿ ಸಯ್ಯದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಸೇರಿದಂತೆ ಗಣ್ಯರಿಂದ ಸಂತಾಪ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಮಾರು 70 ಮಸೀದಿಗಳ ಖಾಝಿ ಉಳ್ಳಾಲ ತಂಙಳ್ ಮರ್ಹೂಂ ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ರವರ ಸುಪುತ್ರ ಸೈಯದ್ ಫಝಲ್ ಕೋಯಮ್ಮ ತಂಙಳ್ ರವರು ಜು.08ರಂದು ಎಟ್ಟಿಕ್ಕುಲಂ ಸ್ವ ಗ್ರಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಅವರ ನಿಧನಕ್ಕೆ ಬೆಳ್ತಂಗಡಿ ತಾಲೂಕಿನ ಸಹಾಯಕ ಖಾಝಿ ಸೆಯ್ಯೆದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್, ಬೆಳ್ತಂಗಡಿ ಸಂಯುಕ್ತ ಜಮಾಅತ್ ಅಧ್ಯಕ್ಷ ಸೈಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ, ಕಾರ್ಯದರ್ಶಿ ಅಬ್ದುರ್ರಝಾಖ್ ಸಖಾಫಿ ಮೊಡಂತಿಯಾರ್, ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ಕಾಸಿಂ ಪದ್ಮುಂಜ, ಎಸ್ ವೈ ಎಸ್ ಜಿಲ್ಲಾ ನಾಯಕ ಅಶ್ರಫ್ ಸಖಾಫಿ ಮೂಡಡ್ಕ ಸೇರಿದಂತೆ ಹಲವಾರು ಸುನ್ನೀ ನಾಯಕರು ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here