Site icon Suddi Belthangady

ಗೊಲ್ಲ (ಯಾದವ) ಸಮಾಜ ಸೇವಾ ಸಂಘ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

ಕಾಶಿಪಟ್ಣ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ ( ಯಾದವ ) ಸಮಾಜ ಸೇವಾ ಸಂಘ ಮಂಗಳೂರು ಇದರ ಬೆಳ್ತಂಗಡಿ ವಲಯದ ಪ್ರಥಮ ವಾರ್ಷಿಕ ಮಹಾಸಭೆ ಕಾಶಿಪಟ್ಣ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಲಯ ಅಧ್ಯಕ್ಷ ಹೆಚ್.ರತ್ನಾಕರ ರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಗೌರವಾಧ್ಯಕ್ಷ ಯು.ಎನ್. ಪ್ರಮೋದ್ ಕುಮಾರ್ ರಾವ್, ಜಿಲ್ಲಾ ಅಧ್ಯಕ್ಷ ಟಿ. ಆರ್. ಕುಮಾರ ಸ್ವಾಮಿ, ಉಪಾಧ್ಯಕ್ಷ ವಿಜಯ ಕುಮಾರ್ ಮೂಡಬಿದ್ರೆ, ಬೆಳ್ತಂಗಡಿ ತಾ.ಪ.ಮಾಜಿ ಅಧ್ಯಕ್ಷ ಶ್ರೀನಿವಾಸ ರಾವ್ ಅಳದಂಗಡಿ, ಕಾಶಿಪಟ್ಣ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ಆಡಳಿತ ಮೋಕ್ತೇಸರ ವೆಂಕಟ್ರಮಣ ಗೊಲ್ಲ, ಬೆಳ್ತಂಗಡಿ ವಲಯದ ಗೌರವಾಧ್ಯಕ್ಷ ರಾಜೇಶ್ ರಾವ್ ಭಾಗವಸಿದ್ದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ ಸಮಾಜದ ವಿದ್ಯಾರ್ಥಿಗಳನ್ನು, ಜಿಲ್ಲಾ ಗೌರವಾಧ್ಯಕ್ಷ ಯು.ಎನ್.ಪ್ರಮೋದ್ ಕುಮಾರ್, ಹಿರಿಯ ಪಶು ವೈದ್ಯಾಧಿಕಾರಿ ಡಾ.ವಿನಯ ಕುಮಾರ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ವಲಯದ ಕಾರ್ಯದರ್ಶಿ ರಾಜೇಶ್ ಕಾಶಿಪಟ್ಣ, ಕೋಶಾಧಿಕಾರಿ ರಮಾನಂದ ಕೆ. ಉಜಿರೆ, ಸದಸ್ಯರು ಉಪಸ್ಥಿತರಿದ್ದರು.

ಶರ್ಮಿಳಾ ಎಂ. ಸ್ವಾಗತಿಸಿ, ವಿದ್ಯಾಲತಾ ಎಂ.ಕೆ. ನಿರೂಪಿಸಿ, ಶುಭಾಶ್ಚಂದ್ರ ಕೆ. ವಂದಿಸಿದರು.

Exit mobile version