Site icon Suddi Belthangady

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ- ಗ್ರಾಮಸ್ಥರಿಂದ ಮರ ತೆರವು

ಕಲ್ಮಂಜ: ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಜು.12ರಂದು ರಾತ್ರಿ ಬಹಳ ದೊಡ್ಡ ಗಾತ್ರದ ಮರ ಬಿದ್ದು ಸಂಚಾರ ವ್ಯವಸ್ಥೆಗೆ ಅಡ್ಡಿಯಾಗಿತ್ತು.

ಇದನ್ನು ಮನಗಂಡ ಗ್ರಾಮಸ್ಥರು ಜು.13ರಂದು ಮುಂಜಾನೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಮುಂಡಾಜೆ ಧರ್ಮಸ್ಥಳ ಸಂಪರ್ಕಿಸುವ ರಸ್ತೆಯಲ್ಲಿ ಘನ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Exit mobile version