Site icon Suddi Belthangady

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 15ನೇ ವೇಣೂರು ಶಾಖೆಯ ಉದ್ಘಾಟನೆ

ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 15ನೇ ವೇಣೂರು ಶಾಖೆಯ ಉದ್ಘಾಟನಾ ಸಮಾರಂಭ ಜು.14ರಂದು ವೇಣೂರಿನ ಮಂಜುಶ್ರೀ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.ಮಾಜಿ ಸಚಿವ ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿದರು.

ಬೆಂಗಳೂರು ನಾರಾಯಣ ಗುರುವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಂಪ್ಯೂಟರ್ ವಿಭಾಗವನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಸಿಡಿಒ ಡೆವೆಲಪ್ ಮೆಂಟ್ ಆಫೀಸರ್ ಪ್ರತಿಮಾ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೋಕ್ತೆಸರಾದ ಜಯರಾಮ ಶೆಟ್ಟಿ, ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಝಕ್ರಿಯಾ, ವೇಣೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ, ರಾಯಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ, ವೇಣೂರು ಮಂಜುಶ್ರೀ ಕಾಂಪ್ಲೆಕ್ಸ್ ಮಾಲಕ ಕೆ.ಉದಯ್ ಕುಮಾರ್ ಕಂಬಳಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ವಲಯದ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಹೊಕ್ಕಿ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು, ಆಡಳಿತ ಮಂಡಳಿಯ ನಿರ್ದೇಶಕರುಗಳಾದ ರಮೇಶ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತ ಎಮ್, ವಾಣಿ ವಸಂತ, ಅರುಣ್ ಕುಮಾರ್ ಎಮ್ ಹಾಗೂ ಅಶಿತ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿದೇರ್ಶಕ ಗಿರೀಶ್ ಕುಮಾರ್ ಪೆರ್ವ ಸ್ವಾಗತಿಸಿದರು.‌

Exit mobile version