Site icon Suddi Belthangady

ಜುಲೈ 17: ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.

ಬಳಂಜದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ನಡೆಸುತ್ತಾ ಬಂದಿರುವ ಶಿವಾಜಿ ಪ್ರೆಂಡ್ಸ್ ಕ್ಲಬ್ ಸದಸ್ಯರು ಈ ವರ್ಷವೂ ಅನಾರೋಗ್ಯದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಸಹಾಯಹಸ್ತ ನೀಡುವುದು ಮತ್ತು ಬಳಂಜ ಶಾಲೆಯಲ್ಲಿ ಈ ವರ್ಷ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಶರಣ್ಯ ಮತ್ತು ಮನ್ವಿತಾರಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲರೂ ಈ ಸಮಾರಂಭದಲ್ಲಿ ಭಾಗಿಯಾಗಬೇಕಾಗಿ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಕೆ.ತಿಳಿಸಿದ್ದಾರೆ.

Exit mobile version