ಕಲ್ಲೇರಿಯಲ್ಲಿ ಜನಔಷಧಿ ಶುಭಾರಂಭ

0

ಕಲ್ಲೇರಿ: ಕಲ್ಲೇರಿ ಪೇಟೆಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶ್ರೀದೇವಿ ಅಣವು ಕಾಂಪ್ಲೆಕ್ಸ್ ಕಲ್ಲೇರಿಯಲ್ಲಿ ಜು.15ರಂದು ಶುಭಾರಂಭಗೊಂಡಿತು. ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ ಉದ್ದಿಮೆಗೆ ಶುಭಹಾರೈಸಿದರು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ, ಬೆಳ್ತಂಗಡಿ ತಾಲೂಕು ಆರೋಗ್ಯಧಿಕಾರಿ ಡಾ.ಸೌಜನ್ಯ ಕುಮಾರಿ, ಉಪ್ಪಿನಂಗಡಿ ಸಮುದಾಯ ಅರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಕೃಷ್ಣಾನಂದ ಕೆ, ತಣ್ಣೀರುಪಂತ ಸಿಎ ಬ್ಯಾಂಕ್ ಅಧ್ಯಕ್ಷ ಜಗದೀಶ್ ಶೆಟ್ಟಿ, ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ತಣ್ಣೀರುಪಂತ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯವಿಕ್ರಂ, ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಸಾಮ್ರಾಟ್, ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನೆಯ ಮಾಜಿ ನೋಡಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ ಪುತ್ತಿಲ ಗುತ್ತು, ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಮುಗೆರೋಡಿ, ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಅಧ್ಯಕ್ಷ ಸುನಿಲ್ ಗೌಡ ಅಣವು ಉಪಸ್ಥಿತರಿದ್ದರು.

ಮಾಲಕರಾದ ವಿದ್ಯಾಧರ ಜೈನ್, ಪದ್ಮವಿದ್ಯಾ ಉಪ್ಪಿನಂಗಡಿ ಮತ್ತು ಮನೆಯವರು ಉಪಸ್ಥಿತರಿದ್ದರು. ಕಡಿಮೆ ಬೆಲೆಯಲ್ಲಿ ಎಲ್ಲಾ ಔಷಧಿಗಳು ಲಭ್ಯವಿದೆ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮಾಲಕರು ತಿಳಿಸಿದರು.

LEAVE A REPLY

Please enter your comment!
Please enter your name here