Site icon Suddi Belthangady

ಬೆಳ್ತಂಗಡಿ: ಭಾಜಪಾ ಮಂಡಲದಿಂದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ರವರಿಗೆ ಅಭಿನಂದನಾ ಕಾರ್ಯಕ್ರಮ ಜು.17ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲದ ಉಪಾಧ್ಯಕ್ಷ ಮೋಹನ ಅಂಡಿಂಜೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಮಾಜಿ ಶಾಸಕ ಪ್ರಭಾಕರ ಬಂಗೇರ, ಮಂಡಲದ ನಿಕಟಪೂರ್ವ ಅಧ್ಯಕ್ಷ ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬಿ. ಎಸ್., ವಸಂತಿ ಮಚ್ಚಿನ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

ರಾಜೇಶ್ ಪೆರ್ಮುಡ ಕಾರ್ಯಕ್ರಮ ನಿರೂಪಿಸಿದರು.

Exit mobile version