ಶಿರಾಡಿಯಲ್ಲಿ ಗುಡ್ಡ ಕುಸಿತ: ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಕೆ

0

ನೆಲ್ಯಾಡಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದಾರೆ.

ಪೊಲೀಸರು ಆ ದಾರಿಯಾಗಿ‌ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ‌ ಸಂಚಾರಕ್ಕೆ ಸಮಸ್ಯೆಯಾಗಿದೆ.

ಈ ಹಿನ್ನೆಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here