Site icon Suddi Belthangady

ರೆಡ್ ಅಲರ್ಟ್ ನಿರಂತರ ಮಳೆ ಹಿನ್ನಲೆ – ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜು 19) ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.19) ಬೆಳ್ತಂಗಡಿ, ಪುತ್ತೂರು, ಕಡಬ, ಬಂಟ್ವಾಳ, ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Exit mobile version