ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ನಲ್ಲಿಯೇ ಪಡೆಯಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರಿಗೆ ಬಿಜೆಪಿ ಶಾಸಕರುಗಳಿಂದ ಮನವಿ

0

ಬೆಳ್ತಂಗಡಿ: ಗ್ರಾಮ ಪಂಚಾಯತಿಗಳು ಹಾಗು ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಏಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ/ ವಸತಿಯೇತರಿಗಾಗಿ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿಯೇ ಪಡೆಯಲು ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗಕ್ಕೆ ತೆರಳಿ ಮನವಿಯನ್ನು ಸಲ್ಲಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಸಕರಾದ ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಗುರುರಾಜ್ ಗಂಟಿಹೊಳೆ, ಭಾಗೀರಥಿ ಮುರುಳ್ಯ, ರಾಜೇಶ್ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here